32.3 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೆಳಾಲು ಅನಂತೋಡಿಯಲ್ಲಿ ನಾಲ್ಕೂವರೆ ಎಕರೆ ಗದ್ದೆಯಲ್ಲಿ 1000 ಕ್ಕೂ ಹೆಚ್ಚು ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ನಾಟಿ ಮಾಡಿದ ಕಾರ್ಯಕ್ರಮ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಘಟನೆಯೊಂದು ಸಮಾಜಮುಖಿಯಾಗಿ, ಬಡವರ ಪಾಲಿನ ಬೆಳಕಾಗಿ, ಪ್ರವಾಹದ ಸಮಯದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಗಳಿಗೆ ಮನೆ ಹಾಗೂ ಕೃಷಿ ಪುನರ್ ನಿರ್ಮಾಣ, ಸರಕಾರಿ ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ಧಿ, ಭತ್ತದ ಬೆಳೆ ಬೆಳೆಯುವಲ್ಲಿ ಜಾಗೃತಿ, ಆರ್ಥಿಕವಾಗಿ ಹಿಂದುಳಿದ ಕ್ರೀಡಾ ಪಟುಗಳಿಗೆ ಆಧುನಿಕ ಸೌಲಭ್ಯ ಸೇರಿದಂತೆ ಎಲ್ಲಾ ವಿಧದ ನೆರವು ನೀಡುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಬದುಕು ಕಟ್ಟೋಣ ಬನ್ನಿ ತಂಡ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ. ಪ್ರಶಸ್ತಿ ಸನ್ಮಾನಗಳು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ತಿಳಿಸಿದರು.

Related posts

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!