25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೆಳಾಲು ಅನಂತೋಡಿಯಲ್ಲಿ ನಾಲ್ಕೂವರೆ ಎಕರೆ ಗದ್ದೆಯಲ್ಲಿ 1000 ಕ್ಕೂ ಹೆಚ್ಚು ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ನಾಟಿ ಮಾಡಿದ ಕಾರ್ಯಕ್ರಮ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಘಟನೆಯೊಂದು ಸಮಾಜಮುಖಿಯಾಗಿ, ಬಡವರ ಪಾಲಿನ ಬೆಳಕಾಗಿ, ಪ್ರವಾಹದ ಸಮಯದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಗಳಿಗೆ ಮನೆ ಹಾಗೂ ಕೃಷಿ ಪುನರ್ ನಿರ್ಮಾಣ, ಸರಕಾರಿ ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ಧಿ, ಭತ್ತದ ಬೆಳೆ ಬೆಳೆಯುವಲ್ಲಿ ಜಾಗೃತಿ, ಆರ್ಥಿಕವಾಗಿ ಹಿಂದುಳಿದ ಕ್ರೀಡಾ ಪಟುಗಳಿಗೆ ಆಧುನಿಕ ಸೌಲಭ್ಯ ಸೇರಿದಂತೆ ಎಲ್ಲಾ ವಿಧದ ನೆರವು ನೀಡುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಬದುಕು ಕಟ್ಟೋಣ ಬನ್ನಿ ತಂಡ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ. ಪ್ರಶಸ್ತಿ ಸನ್ಮಾನಗಳು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ತಿಳಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya
error: Content is protected !!