37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

ಬೆಳ್ತಂಗಡಿ : ಮನೆಯಲ್ಲಿ‌ ನಡೆದ ಸಣ್ಣ ಗಲಾಟೆಯಿಂದ ನೊಂದು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಲು ಮುಂದಾದ ಮಹಿಳೆಯನ್ನು ಧರ್ಮಸ್ಥಳ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಹೋಗಿ ಮಹಿಳೆಯನ್ನು ರಕ್ಷಣೆ ಮಾಡಿದ ಘಟನೆ ಫೆ.10 ರಂದು ರಾತ್ರಿ ನಡೆದಿದೆ.

ಬೆಂಗಳೂರು ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಅನ್ನಪೂರ್ಣ (50) ಎಂಬಾಕ್ಕೆ ತನ್ನ ಮನೆಯಲ್ಲಿ ನಡೆದ ಸಣ್ಣ ಗಲಾಟೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಫೆ.10 ರಂದು ಬೆಳಗ್ಗೆ ಬಸ್ ಮೂಲಕ ಧರ್ಮಸ್ಥಳಕ್ಕೆ ರಾತ್ರಿ ಬಂದಿದ್ದು ನಂತರ ಮಗ ಚಿಕ್ಕಜಾಲ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಮೊಬೈಲ್ ಲೋಕೇಷನ್ ಮೂಲಕ ಮಹಿಳೆ ಧರ್ಮಸ್ಥಳದಲ್ಲಿರುವುದು ಕಂಡು ಬಂದಿದೆ ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿ ಲೊಕೇಷನ್ ಕಳುಹಿಸಿದ್ದರು. ಕಿಶೋರ್ ಕುಮಾರ್ ಕರ್ತವ್ಯ ಬಿಟ್ಟು ಫೆ.10 ರಂದು ರಾತ್ರಿ ಮನೆಗೆ ಹೋಗಿದ್ದರು. ತಕ್ಷಣ ಠಾಣೆಯ ಕೆಲ ಸಿಬ್ಬಂದಿಗಳನ್ನು ವಿವಿಧೆಡೆ ಹುಡುಕಾಟ ನಡೆಸಲು ಕಳುಹಿಸಿದ್ದರು. ಅದಲ್ಲದೆ ಸಬ್ ಇನ್ಸ್ಪೆಕ್ಟರ್ ಮಾಫ್ತಿಯಲ್ಲಿ ಧರ್ಮಸ್ಥಳ ಸುತ್ತಮುತ್ತ ನಡೆದುಕೊಂಡು ಹೋಗಿ ಮಹಿಳೆಗಾಗಿ ಹುಡುಕಾಟ ‌ನಡೆಸಿದಾಗ ರಾತ್ರಿ ಸುಮಾರು 10:30 ಕ್ಕೆ ಧರ್ಮಸ್ಥಳ ದ್ವಾರದ ಬಳಿ ಪತ್ತೆಯಾಗಿದ್ದಾರೆ.

ಮಹಿಳೆಯನ್ನು ರಕ್ಷಣೆ‌ ಮಾಡಿ ಅವರನ್ನು ಸಮಾಧಾನ ಮಾಡಿ ನೀರು, ಊಟ ತೆಗೆಸಿಕೊಟ್ಟು ನೇರ ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆತಂದು ವಿಶಾಂತ್ರಿ ಮಾಡಿಸಿ ಕುಟುಂಬದವರಿಗೆ ಕರೆ ಮಾಡಿ ರಾತ್ರಿಯೇ ಕರೆಸಿ ಅವರೊಂದಿಗೆ ಕಳುಹಿಸಿಕೊಟ್ಟು ಸಬ್ ಇನ್ಸ್ಪೆಕ್ಟರ್ ಮಾನವೀಯತೆ ಮೆರೆದಿದ್ದಾರೆ.

ಈ ಘಟನೆ ಬಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ಮಹಿಳೆಯ ಬಳಿ ವರದಿಗಾರರು ಸಂಪರ್ಕ ಮಾಡಿ ಮಾಹಿತಿ ಕೇಳಿದಾಗ ನನಗೆ ಗಲಾಟೆಯಿಂದ ನೊಂದು ನೇರ ಬಸ್ ನಲ್ಲಿ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ ಅವಾಗ ಸಬ್ ಇನ್ಸ್ಪೆಕ್ಟರ್ ಒಬ್ರು ಬಂದು ರಕ್ಷಣೆ ಮಾಡಿ ಊಟ ಮಾಡಿಸಿದ್ದಾರೆ. ನೋವಿನಿಂದ ಈಗ ಜಾಸ್ತಿ ಮಾತಾನಾಡಲು ಅಗುತ್ತಿಲ್ಲ. ಮನೆಯವರು ಬಂದ ಮೇಲೆ ಅವರೊಂದಿಗೆ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

Related posts

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!