23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

ಬೆಳ್ತಂಗಡಿ: ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಪೆನ್ಸಿಲ್ವೇನಿಯ ಯುನಿರ್ವಸಿಟಿಯ 12 ಮಂದಿ ವಿದ್ಯಾರ್ಥಿಗಳ ತಂಡವು ಯುನಿರ್ವಸಿಟಿಯ ಹಿರಿಯ ಪ್ರೊಫೆಸರ್ ಫೆಮಿದಹ್ಯಾಂಡಿ ಮತ್ತು ನಿಟ್ಟೆಯ ವಿನೋದ್ ದೀಕ್ಷಿತ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಭೇಟಿ ನೀಡಿ ಅಧ್ಯಯನ ನಡೆಸಿದರು.

ಮೊದಲ ದಿನ ಪ್ರಗತಿಬಂಧು ಸಂಘ, ಮಹಿಳಾ ಸ್ವಸಹಾಯ ಸಂಘ, ಮಾದರಿ ಕೃಷಿಕರು, ಒಕ್ಕೂಟ ವ್ಯವಸ್ಥೆ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಬಗ್ಗೆ ಉಡುಪಿ ತಾಲೂಕಿನಲ್ಲಿ ಅಧ್ಯಯನ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎರಡನೇ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ). ಇದರ ಅಧ್ಯಕ್ಷ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಯ ಪ್ರಸ್ತುತ ಕಾರ್ಯಕ್ರಮಗಳ ಬಗ್ಗೆ ಮಾರ್ಗದರ್ಶನ ಪಡೆದುಕೊಂಡರು.

ನಂತರ ಯೋಜನೆಯ ಕೇಂದ್ರ ಕಛೇರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಂದ ಯೋಜನೆಯಲ್ಲಿರುವ ವಿವಿಧ ಕಾರ್ಯಕ್ರಮಗಳು, ಯೋಜನೆಯು ಗ್ರಾಮೀಣಭಿವೃದ್ಧಿಯಲ್ಲಿ ಯಾವ ರೀತಿ ಮಹತ್ವದ ಪಾತ್ರ ವಹಿಸಿದೆ. ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಿಂದ ಗ್ರಾಮಗಳಲ್ಲಾದ ಬದಲಾವಣೆಯ ಬಗ್ಗೆ ಹಾಗೂ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಲ್ಲಿ ಯೋಜನೆಯು ನೀಡಿದ ಕೊಡುಗೆಯ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು ಮತ್ತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು. ನಂತರ ಉಗ್ರಾಣ ಕಾರ್ ಮ್ಯುಸಿಯಂ ಭೇಟಿ ನೀಡಿದ ತಂಡಕ್ಕೆ ಕ್ಷೇಮವನದ ಸಿಇಒ ಶ್ರೀಮತಿ ಶ್ರದ್ಧಾ ಅಮಿತ್ ಇವರು ಸೂಕ್ತ ವಿವರಣೆಯೊಂದಿಗೆ ಮಾಹಿತಿ ನೀಡಿದರು. ತಂಡದ ನಿರ್ವಹಣೆಯನ್ನು ಮಾನವ ಸಂಪನ್ಮೂಲ ವಿಭಾಗದ ಯೋಜನಾಧಿಕಾರಿ ಶ್ರೀನಿವಾಸ.ಪಿ ನಡೆಸಿದರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya
error: Content is protected !!