24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!