20 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya
error: Content is protected !!