22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya
error: Content is protected !!