23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya
error: Content is protected !!