25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya
error: Content is protected !!