22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಲವೀನಾ ನೊರೊನ್ಹ-ಮುಖ್ಯ ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಮುಲ್ಕಿ, ಡಾ.ನಫೀಸಾ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ವಾಮದಪದವು, ಡಾ.ಶಶಿಕಲಾ-ದಂತ ಆರೋಗ್ಯ ವೈದ್ಯಾಧಿಕಾರಿ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಡಾ.ತುಷಾರ-ದಂತ ಆರೋಗ್ಯ ವೈದ್ಯಾಧಿಕಾರಿ, ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

60ಕ್ಕೂ ಹೆಚ್ಚು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ವಿಜಯಕುಮಾರ್ ಆಪ್ತಸಮಾಲೋಚಕರು ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಅಶ್ರಮದ ವೈದ್ಯರಾದ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya
error: Content is protected !!