25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್‌ ಸದಸ್ಯರುಗಳಾದ ಶ್ರೀಮತಿ ಯಶೋಧ, ಸಂತೋಷ್, ನಾರಾಯಣ, ಶ್ರೀಮತಿ ಸರಿತಾ, ಶ್ರೀಮತಿ ಮೀನಾ, ವಸಂತ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಮಮತಾ ಎ.ಜಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಯೋಗಿನಿ ಶೆಟ್ಟಿ ಅನುಪಾಲನ ವರದಿ, ಪಂಚಾಯತ್ ಸಿಬ್ಬಂದಿ ಸಂತೋಷ್ ವಾರ್ಡ್ ಸಭೆಯ ಬೇಡಿಕೆ, ಬಿಲ್ ಕಲೆಕ್ಟರ್ ಸತೀಶ್ ಜಮಾ ಖರ್ಚುಗಳ ವಿವರಗಳನ್ನು ವಾಚಿಸಿದರು. ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ವಂದಿಸಿದರು.

Related posts

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya
error: Content is protected !!