September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್‌ ಸದಸ್ಯರುಗಳಾದ ಶ್ರೀಮತಿ ಯಶೋಧ, ಸಂತೋಷ್, ನಾರಾಯಣ, ಶ್ರೀಮತಿ ಸರಿತಾ, ಶ್ರೀಮತಿ ಮೀನಾ, ವಸಂತ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಮಮತಾ ಎ.ಜಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಯೋಗಿನಿ ಶೆಟ್ಟಿ ಅನುಪಾಲನ ವರದಿ, ಪಂಚಾಯತ್ ಸಿಬ್ಬಂದಿ ಸಂತೋಷ್ ವಾರ್ಡ್ ಸಭೆಯ ಬೇಡಿಕೆ, ಬಿಲ್ ಕಲೆಕ್ಟರ್ ಸತೀಶ್ ಜಮಾ ಖರ್ಚುಗಳ ವಿವರಗಳನ್ನು ವಾಚಿಸಿದರು. ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ವಂದಿಸಿದರು.

Related posts

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya
error: Content is protected !!