32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

ಗೇರುಕಟ್ಟೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಳ ಇಲ್ಲಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ಫೆ.9 ರಂದು ನಡೆಯಿತು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಕಿರಣ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ವಸಂತ ರಾಯಿಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಗುರುವಾಯನಕೆರೆ ವಲಯ ಸಿ ಆರ್ ಪಿ ರಾಜೇಶ್, ಹಳೆವಿದ್ಯಾರ್ಥಿ ಸಂಘದ ಧ್ಯೇಯ, ಉದ್ದೇಶಗಳು, ಕಾರ್ಯನಿರ್ವಹಿಸಬೇಕಾದ ಬಗ್ಗೆ ಮಾಹಿತಿ ನೀಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ರೀತಾ ಚಂದ್ರಶೇಖರ್ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳಾದ ರಾಜೇಶ್ ಪೆಂರ್ಬುಡ, ನಾಸೀರುದ್ದೀನ್ ಜಾರಿಗೆಬೈಲು, ದಿವ್ಯಾ ನಾಳ ಶಾಲಾ ದಿನಗಳ ಮೆಲುಕು ಹಾಕಿದರು.


ಈ ಸಂದರ್ಭದಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ರಾಜೇಶ್ ಪೆಂರ್ಬುಡ ಅವರನ್ನು ಆಯ್ಕೆಮಾಡಲಾಯಿತು.


ಉಪಾಧ್ಯಕ್ಷರಾಗಿ ಅಬ್ದುಲ್ ರಫೀಕ್ ಜಾರಿಗೆಬೈಲು, ಕಾರ್ಯದರ್ಶಿಯಾಗಿ ಗಣೇಶ್ ಬಿ. ನಾಳ, ಜತೆಕಾರ್ಯದರ್ಶಿಯಾಗಿ ದಿವ್ಯಾ ನಾಳ, ಕೋಶಾಧಿಕಾರಿಯಾಗಿ ಸಂದೀಪ್ ಗಾಣಿಗ ನಾಳ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರವಿಕಿರಣ್, ಸೋಮಣ್ಣ ಗೌಡ ಕುಬಾಯ, ನಾಸೀರುದ್ದೀನ್ ಜಾರಿಗೆಬೈಲು, ಜಯಚಂದ್ರ ಗಂಪದಕೋಡಿ, ಸಮಿತಾ ನಾಳ, ಶಶಿಕಲಾ ನಾಳ, ಗೌರವ ಸಲಹೆಗಾರರಾಗಿ ವಸಂತ‌ ಮಜಲು, ಸುಧಾಕರ ಮಜಲು, ಅಬ್ದುಲ್ ಲತೀಫ್ ಪರಿಮ, ಕೇಶವ ಪೂಜಾರಿ ನಾಳ, ಅಶೋಕ ಆಚಾರ್ಯ ಗಂಪದಕೋಡಿ, ವಸಂತ ರಾಯಿಮಾರ್ ಅವರನ್ನು ಆಯ್ಕೆ ಮಾಡಲಾಯಿತು.


ಹರಿಶ್ಚಂದ್ರ ಗಂಪದಕೋಡಿ, ಶೋಭಾ ಆಚಾರ್ಯ ನಾಳ, ರಾಜೇಂದ್ರ ಮಡಿವಾಳ, ಇದ್ದರು. ಸಹಶಿಕ್ಷಕಿ ಕವಿತಾ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ರೋನಾಲ್ಡ್ ಪಿಲೀಫ್ ಡಿಮೆಲ್ಲೋ ಪ್ರಾಸ್ತಪಿಸಿ , ವಂದಿಸಿದರು. ಸಹಶಿಕ್ಷಕಿ ದಮಯಂತಿ ಕಾರ್ಯಕ್ರಮ ‌ನಿರೂಪಿಸಿದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!