July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

ಉಜಿರೆ : ಶ್ರೀ ರವಿ ಶಂಕರ್ ಗುರೂಜಿ ಯವರ “ಜೀವನ ಕಲೆ ಪ್ರತಿಷ್ಠಾನ” ಸಂಸ್ಥೆ ( ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ) ಬೆಂಗಳೂರು ಇವರ ವತಿಯಿಂದ ‘ಆನಂದೋತ್ಸವ ಶಿಬಿರ’ ಎಂಬ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಫೆ. 19ರಿಂದ 24ರ ವರೆಗೆ ಸಂಜೆ 6 ರಿಂದ 8.30 ರ ವರೆಗೆ ‘ಅರಿಪ್ಪಾಡಿ ಮಠ ಸಭಾಂಗಣ ಉಜಿರೆ ‘ ಇಲ್ಲಿ ಏರ್ಪಡಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ತಿಳಿಸಿದೆ.

ಕಾರ್ಯಕ್ರಮವು ಸುದರ್ಶನ ಕ್ರಿಯೆ ಎಂಬ ಒಂದು ಲಯಬದ್ದ ಉಸಿರಾಟದ ಕಾರ್ಯಕ್ರಮವಾಗಿದ್ದು, ದೇಹದ ಆರೋಗ್ಯ ವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಪ್ರಪಂಚದ ಎಲ್ಲ ಕಡೆ ಮೂರುವರೆ ಕೋಟಿಗೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದಿದ್ದಾರೆ. 180 ಕ್ಕೂ ಹೆಚ್ಚು ದೇಶಗಳಲ್ಲಿ ಜೀವನ ಕಲೆ ಪ್ರತಿಷ್ಠಾನ ಜನಪ್ರಿಯತೆಯನ್ನು ಗಳಿಸಿದೆ.
ಅಮೆರಿಕದಲ್ಲಿ ನೂರಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳಲ್ಲಿ ಇದನ್ನು ಪಠ್ಯ ಕ್ರಮವಾಗಿ ಅಳವಡಿಸಲಾಗಿದೆ. ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಜನರ ಒತ್ತಡ ಭರಿತ ಜೀವನ ಕ್ರಮವನ್ನು ಬದಲಾಯಿಸಿ ಪ್ರಶಾಂತ ಮನಸ್ಸನ್ನು ಕಂಡುಕೊಳ್ಳಲು ನೇರವಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯು ಆಶಯ ವ್ಯಕ್ತಪಡಿಸಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ :9743642012

Related posts

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya
error: Content is protected !!