September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

ಉಜಿರೆ: ಬದುಕು ಕಟ್ಟೋಣ ಬನ್ನಿ ತಂಡದ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೆಳಾಲು ಅನಂತೋಡಿಯಲ್ಲಿ ನಾಲ್ಕೂವರೆ ಎಕರೆ ಗದ್ದೆಯಲ್ಲಿ 1000 ಕ್ಕೂ ಹೆಚ್ಚು ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ನಾಟಿ ಮಾಡಿದ ಕಾರ್ಯಕ್ರಮ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಘಟನೆಯೊಂದು ಸಮಾಜಮುಖಿಯಾಗಿ, ಬಡವರ ಪಾಲಿನ ಬೆಳಕಾಗಿ, ಪ್ರವಾಹದ ಸಮಯದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಗಳಿಗೆ ಮನೆ ಹಾಗೂ ಕೃಷಿ ಪುನರ್ ನಿರ್ಮಾಣ, ಸರಕಾರಿ ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ಧಿ, ಭತ್ತದ ಬೆಳೆ ಬೆಳೆಯುವಲ್ಲಿ ಜಾಗೃತಿ, ಆರ್ಥಿಕವಾಗಿ ಹಿಂದುಳಿದ ಕ್ರೀಡಾ ಪಟುಗಳಿಗೆ ಆಧುನಿಕ ಸೌಲಭ್ಯ ಸೇರಿದಂತೆ ಎಲ್ಲಾ ವಿಧದ ನೆರವು ನೀಡುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಬದುಕು ಕಟ್ಟೋಣ ಬನ್ನಿ ತಂಡ ಸಮಾಜಮುಖಿ ಕೆಲಸ ನಿರ್ವಹಿಸುತ್ತಿದೆ. ಪ್ರಶಸ್ತಿ ಸನ್ಮಾನಗಳು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ತಿಳಿಸಿದರು.

Related posts

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya
error: Content is protected !!