29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

ಬೆಳ್ತಂಗಡಿ : ಮನೆಯಲ್ಲಿ‌ ನಡೆದ ಸಣ್ಣ ಗಲಾಟೆಯಿಂದ ನೊಂದು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಲು ಮುಂದಾದ ಮಹಿಳೆಯನ್ನು ಧರ್ಮಸ್ಥಳ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಹೋಗಿ ಮಹಿಳೆಯನ್ನು ರಕ್ಷಣೆ ಮಾಡಿದ ಘಟನೆ ಫೆ.10 ರಂದು ರಾತ್ರಿ ನಡೆದಿದೆ.

ಬೆಂಗಳೂರು ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಅನ್ನಪೂರ್ಣ (50) ಎಂಬಾಕ್ಕೆ ತನ್ನ ಮನೆಯಲ್ಲಿ ನಡೆದ ಸಣ್ಣ ಗಲಾಟೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಫೆ.10 ರಂದು ಬೆಳಗ್ಗೆ ಬಸ್ ಮೂಲಕ ಧರ್ಮಸ್ಥಳಕ್ಕೆ ರಾತ್ರಿ ಬಂದಿದ್ದು ನಂತರ ಮಗ ಚಿಕ್ಕಜಾಲ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಮೊಬೈಲ್ ಲೋಕೇಷನ್ ಮೂಲಕ ಮಹಿಳೆ ಧರ್ಮಸ್ಥಳದಲ್ಲಿರುವುದು ಕಂಡು ಬಂದಿದೆ ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿ ಲೊಕೇಷನ್ ಕಳುಹಿಸಿದ್ದರು. ಕಿಶೋರ್ ಕುಮಾರ್ ಕರ್ತವ್ಯ ಬಿಟ್ಟು ಫೆ.10 ರಂದು ರಾತ್ರಿ ಮನೆಗೆ ಹೋಗಿದ್ದರು. ತಕ್ಷಣ ಠಾಣೆಯ ಕೆಲ ಸಿಬ್ಬಂದಿಗಳನ್ನು ವಿವಿಧೆಡೆ ಹುಡುಕಾಟ ನಡೆಸಲು ಕಳುಹಿಸಿದ್ದರು. ಅದಲ್ಲದೆ ಸಬ್ ಇನ್ಸ್ಪೆಕ್ಟರ್ ಮಾಫ್ತಿಯಲ್ಲಿ ಧರ್ಮಸ್ಥಳ ಸುತ್ತಮುತ್ತ ನಡೆದುಕೊಂಡು ಹೋಗಿ ಮಹಿಳೆಗಾಗಿ ಹುಡುಕಾಟ ‌ನಡೆಸಿದಾಗ ರಾತ್ರಿ ಸುಮಾರು 10:30 ಕ್ಕೆ ಧರ್ಮಸ್ಥಳ ದ್ವಾರದ ಬಳಿ ಪತ್ತೆಯಾಗಿದ್ದಾರೆ.

ಮಹಿಳೆಯನ್ನು ರಕ್ಷಣೆ‌ ಮಾಡಿ ಅವರನ್ನು ಸಮಾಧಾನ ಮಾಡಿ ನೀರು, ಊಟ ತೆಗೆಸಿಕೊಟ್ಟು ನೇರ ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆತಂದು ವಿಶಾಂತ್ರಿ ಮಾಡಿಸಿ ಕುಟುಂಬದವರಿಗೆ ಕರೆ ಮಾಡಿ ರಾತ್ರಿಯೇ ಕರೆಸಿ ಅವರೊಂದಿಗೆ ಕಳುಹಿಸಿಕೊಟ್ಟು ಸಬ್ ಇನ್ಸ್ಪೆಕ್ಟರ್ ಮಾನವೀಯತೆ ಮೆರೆದಿದ್ದಾರೆ.

ಈ ಘಟನೆ ಬಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ಮಹಿಳೆಯ ಬಳಿ ವರದಿಗಾರರು ಸಂಪರ್ಕ ಮಾಡಿ ಮಾಹಿತಿ ಕೇಳಿದಾಗ ನನಗೆ ಗಲಾಟೆಯಿಂದ ನೊಂದು ನೇರ ಬಸ್ ನಲ್ಲಿ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ ಅವಾಗ ಸಬ್ ಇನ್ಸ್ಪೆಕ್ಟರ್ ಒಬ್ರು ಬಂದು ರಕ್ಷಣೆ ಮಾಡಿ ಊಟ ಮಾಡಿಸಿದ್ದಾರೆ. ನೋವಿನಿಂದ ಈಗ ಜಾಸ್ತಿ ಮಾತಾನಾಡಲು ಅಗುತ್ತಿಲ್ಲ. ಮನೆಯವರು ಬಂದ ಮೇಲೆ ಅವರೊಂದಿಗೆ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

Related posts

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!