23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!