19.1 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!