22.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆ.9 ರಂದು ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.

ರವಿ ಟಿ ಕಂದೂರು ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ನಿಡಿಗಲ್ ಶ್ರೀ ಶಾಂತಿನಾಥ ಜೈನ ಬಸದಿ ಆಡಳಿತ ಮೊಕ್ತೇಸರರು ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ದೀಪ ಪ್ರಜ್ವಲನೆಗೊಳಿಸಿ ಉದ್ಘಾಟಿಸಿದರು. ರಜತ ಸಂಭ್ರಮ ಸಮಿತಿ ಅಧ್ಯಕ್ಷ ಉಮೇಶ್ ಪೂಜಾರಿ , ಗೆಳೆಯರ ಬಳಗ ಅಧ್ಯಕ್ಷ ಸುಬ್ರಾಯ ಅಕ್ಷಯನಗರ ಸಭಾಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಸಂಚಾಲಕರು ನಾಮ್ ದೇವ್ ರಾವ್ , ಪ್ರವೀಣ್ ಫೆರ್ನಾಂಡೀಸ್ ಉದ್ಯಮಿಗಳು ಹಳ್ಳಿ ಮನೆ ಉಜಿರೆ, ಧರ್ಮಸ್ಥಳ ಆರಕ್ಷಕ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ, ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ, ವಿಶೇಷ ಸಂಪನ್ಮೂಲ ಶಿಕ್ಷಕರು ಶ್ರೀಮತಿ ಸೀತಾ ಆರ್ ಶೇಠ್ , ಮಂಗಳೂರು ಅಪ್ಪೆ ಕಲ್ಲುರ್ಟಿ ವರ್ತೆ ಸೇವಾ ಸಂಘದ ಅಧ್ಯಕ್ಷ ವಿಜಯ್ ಕಾಸರಗೋಡು, ಅಕ್ಷಯ ನಗರ ಗೆಳೆಯರ ಬಳಗ ಸಂಚಾಲಕರು ಶೀನ, ಸ ಹಿ ಪ್ರಾ ಶಾಲೆ ಕಲ್ಮಂಜ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಹಮೀದ್ ಬಿ ಎನ್, ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀ ಕೊಳ್ತಿಗೆ ನಾರಾಯಣ ಗೌಡ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಗೆಳೆಯರ ಬಳಗವನ್ನು ಕಟ್ಟಿ ಬೆಳೆಸಿರುವ ಹಿರಿಯ ಸಲಹೆಗಾರರಿಗೆ, ಹಿರಿಯ ಸದಸ್ಯರಿಗೆ, ಕಳೆದ 25 ವರ್ಷಗಳಲ್ಲಿ ಬಳಗವನ್ನು ಮುನ್ನಡೆಸಿದ ಎಲ್ಲಾ ಅಧ್ಯಕ್ಷರುಗಳಿಗೆ, ಹಾಗೂ ಭಾರತೀಯ ಸೇನೆಯ ನಿವೃತ್ತ ವೀರ ಯೋಧ ಮಂಜುನಾಥ ನಾಯ್ಕ ರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.

ರಜತ ಸಂಭ್ರಮದ ಅಂಗವಾಗಿ ನಡೆದ ಕ್ರೀಡಾಕೂಟದ ಬಹುಮಾನ ವಿತರಣೆ ಮಾಡಲಾಯಿತು. ಊರಿನವರ ಉತ್ತಮ ಸಹಕಾರ ದಾನಿಗಳ ಕೊಡುಗೆ ಹಾಗೂ ಗೆಳೆಯರ ಬಳಗದ ಸರ್ವ ಸದಸ್ಯರ ಕಠಿಣ ಪರಿಶ್ರಮದಿಂದ 25 ಸಂವತ್ಸರವನ್ನು ಯಶಸ್ವಿಯಾಗಿ ಪೂರೈಸಿರುವ ಗೆಳೆಯರ ಬಳಗದ ರಜತ ಸಂಭ್ರಮ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಮಕ್ಕಳಿಂದ ಹಾಗೂ ಊರವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಬದ್ ಕ್ ದ ಬಿಲೆ ಎಂಬ ತುಳು ನಾಟಕ ಹಾಗೂ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸಿದ ತುಳು ಹಾಸ್ಯಮಯ ನಾಟಕ ‘ರಂಗಭೂಮಿ’ ಯಶಸ್ವಿಯಾಗಿ ಪ್ರದರ್ಶನಗೊಂಡಿತು.

ನೆಲ್ಸನ್ ಮೋನಿಸ್ ಅಕ್ಷಯನಗರ ಹಾಗೂ ಶ್ರೀಮತಿ ಯಶೋಧ ಪಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya
error: Content is protected !!