23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀ ಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭಿಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು , ರಾಜವರ್ಮ ಬಲ್ಲಾಳ್, ಬಲ್ಲಾಳ್ ಕುಟುಂಬಸ್ಥರು, ಅರ್ಚಕರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!