September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀ ಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭಿಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು , ರಾಜವರ್ಮ ಬಲ್ಲಾಳ್, ಬಲ್ಲಾಳ್ ಕುಟುಂಬಸ್ಥರು, ಅರ್ಚಕರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!