April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya
error: Content is protected !!