24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!