23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya
error: Content is protected !!