24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya
error: Content is protected !!