22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!