25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!