22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆ.9 ರಂದು ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.

ರವಿ ಟಿ ಕಂದೂರು ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ನಿಡಿಗಲ್ ಶ್ರೀ ಶಾಂತಿನಾಥ ಜೈನ ಬಸದಿ ಆಡಳಿತ ಮೊಕ್ತೇಸರರು ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ದೀಪ ಪ್ರಜ್ವಲನೆಗೊಳಿಸಿ ಉದ್ಘಾಟಿಸಿದರು. ರಜತ ಸಂಭ್ರಮ ಸಮಿತಿ ಅಧ್ಯಕ್ಷ ಉಮೇಶ್ ಪೂಜಾರಿ , ಗೆಳೆಯರ ಬಳಗ ಅಧ್ಯಕ್ಷ ಸುಬ್ರಾಯ ಅಕ್ಷಯನಗರ ಸಭಾಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಸಂಚಾಲಕರು ನಾಮ್ ದೇವ್ ರಾವ್ , ಪ್ರವೀಣ್ ಫೆರ್ನಾಂಡೀಸ್ ಉದ್ಯಮಿಗಳು ಹಳ್ಳಿ ಮನೆ ಉಜಿರೆ, ಧರ್ಮಸ್ಥಳ ಆರಕ್ಷಕ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ, ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ, ವಿಶೇಷ ಸಂಪನ್ಮೂಲ ಶಿಕ್ಷಕರು ಶ್ರೀಮತಿ ಸೀತಾ ಆರ್ ಶೇಠ್ , ಮಂಗಳೂರು ಅಪ್ಪೆ ಕಲ್ಲುರ್ಟಿ ವರ್ತೆ ಸೇವಾ ಸಂಘದ ಅಧ್ಯಕ್ಷ ವಿಜಯ್ ಕಾಸರಗೋಡು, ಅಕ್ಷಯ ನಗರ ಗೆಳೆಯರ ಬಳಗ ಸಂಚಾಲಕರು ಶೀನ, ಸ ಹಿ ಪ್ರಾ ಶಾಲೆ ಕಲ್ಮಂಜ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಹಮೀದ್ ಬಿ ಎನ್, ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀ ಕೊಳ್ತಿಗೆ ನಾರಾಯಣ ಗೌಡ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಗೆಳೆಯರ ಬಳಗವನ್ನು ಕಟ್ಟಿ ಬೆಳೆಸಿರುವ ಹಿರಿಯ ಸಲಹೆಗಾರರಿಗೆ, ಹಿರಿಯ ಸದಸ್ಯರಿಗೆ, ಕಳೆದ 25 ವರ್ಷಗಳಲ್ಲಿ ಬಳಗವನ್ನು ಮುನ್ನಡೆಸಿದ ಎಲ್ಲಾ ಅಧ್ಯಕ್ಷರುಗಳಿಗೆ, ಹಾಗೂ ಭಾರತೀಯ ಸೇನೆಯ ನಿವೃತ್ತ ವೀರ ಯೋಧ ಮಂಜುನಾಥ ನಾಯ್ಕ ರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.

ರಜತ ಸಂಭ್ರಮದ ಅಂಗವಾಗಿ ನಡೆದ ಕ್ರೀಡಾಕೂಟದ ಬಹುಮಾನ ವಿತರಣೆ ಮಾಡಲಾಯಿತು. ಊರಿನವರ ಉತ್ತಮ ಸಹಕಾರ ದಾನಿಗಳ ಕೊಡುಗೆ ಹಾಗೂ ಗೆಳೆಯರ ಬಳಗದ ಸರ್ವ ಸದಸ್ಯರ ಕಠಿಣ ಪರಿಶ್ರಮದಿಂದ 25 ಸಂವತ್ಸರವನ್ನು ಯಶಸ್ವಿಯಾಗಿ ಪೂರೈಸಿರುವ ಗೆಳೆಯರ ಬಳಗದ ರಜತ ಸಂಭ್ರಮ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಮಕ್ಕಳಿಂದ ಹಾಗೂ ಊರವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಬದ್ ಕ್ ದ ಬಿಲೆ ಎಂಬ ತುಳು ನಾಟಕ ಹಾಗೂ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸಿದ ತುಳು ಹಾಸ್ಯಮಯ ನಾಟಕ ‘ರಂಗಭೂಮಿ’ ಯಶಸ್ವಿಯಾಗಿ ಪ್ರದರ್ಶನಗೊಂಡಿತು.

ನೆಲ್ಸನ್ ಮೋನಿಸ್ ಅಕ್ಷಯನಗರ ಹಾಗೂ ಶ್ರೀಮತಿ ಯಶೋಧ ಪಿ ಕಾರ್ಯಕ್ರಮ ನಿರೂಪಿಸಿದರು.

Related posts

ಮೃತ ಸುಮಂತ್ ಕೊಲೆ ಪ್ರಕರಣ, 5 ತಿಂಗಳಾದರೂ ಪತ್ತೆಯಾಗದ ಸುಳಿವು: ಸಮಗ್ರ ತನಿಖೆಗೆ ಶಾಸಕ ಹರೀಶ್ ಪೂಂಜ ಮತ್ತು ಪೋಷಕರೊಂದಿಗೆ ಎಸ್‌ಪಿ ಭೇಟಿ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya
error: Content is protected !!