25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆ.9 ರಂದು ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.

ರವಿ ಟಿ ಕಂದೂರು ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ನಿಡಿಗಲ್ ಶ್ರೀ ಶಾಂತಿನಾಥ ಜೈನ ಬಸದಿ ಆಡಳಿತ ಮೊಕ್ತೇಸರರು ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ದೀಪ ಪ್ರಜ್ವಲನೆಗೊಳಿಸಿ ಉದ್ಘಾಟಿಸಿದರು. ರಜತ ಸಂಭ್ರಮ ಸಮಿತಿ ಅಧ್ಯಕ್ಷ ಉಮೇಶ್ ಪೂಜಾರಿ , ಗೆಳೆಯರ ಬಳಗ ಅಧ್ಯಕ್ಷ ಸುಬ್ರಾಯ ಅಕ್ಷಯನಗರ ಸಭಾಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಸಂಚಾಲಕರು ನಾಮ್ ದೇವ್ ರಾವ್ , ಪ್ರವೀಣ್ ಫೆರ್ನಾಂಡೀಸ್ ಉದ್ಯಮಿಗಳು ಹಳ್ಳಿ ಮನೆ ಉಜಿರೆ, ಧರ್ಮಸ್ಥಳ ಆರಕ್ಷಕ ಠಾಣೆ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ, ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ, ವಿಶೇಷ ಸಂಪನ್ಮೂಲ ಶಿಕ್ಷಕರು ಶ್ರೀಮತಿ ಸೀತಾ ಆರ್ ಶೇಠ್ , ಮಂಗಳೂರು ಅಪ್ಪೆ ಕಲ್ಲುರ್ಟಿ ವರ್ತೆ ಸೇವಾ ಸಂಘದ ಅಧ್ಯಕ್ಷ ವಿಜಯ್ ಕಾಸರಗೋಡು, ಅಕ್ಷಯ ನಗರ ಗೆಳೆಯರ ಬಳಗ ಸಂಚಾಲಕರು ಶೀನ, ಸ ಹಿ ಪ್ರಾ ಶಾಲೆ ಕಲ್ಮಂಜ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಹಮೀದ್ ಬಿ ಎನ್, ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀ ಕೊಳ್ತಿಗೆ ನಾರಾಯಣ ಗೌಡ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಗೆಳೆಯರ ಬಳಗವನ್ನು ಕಟ್ಟಿ ಬೆಳೆಸಿರುವ ಹಿರಿಯ ಸಲಹೆಗಾರರಿಗೆ, ಹಿರಿಯ ಸದಸ್ಯರಿಗೆ, ಕಳೆದ 25 ವರ್ಷಗಳಲ್ಲಿ ಬಳಗವನ್ನು ಮುನ್ನಡೆಸಿದ ಎಲ್ಲಾ ಅಧ್ಯಕ್ಷರುಗಳಿಗೆ, ಹಾಗೂ ಭಾರತೀಯ ಸೇನೆಯ ನಿವೃತ್ತ ವೀರ ಯೋಧ ಮಂಜುನಾಥ ನಾಯ್ಕ ರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.

ರಜತ ಸಂಭ್ರಮದ ಅಂಗವಾಗಿ ನಡೆದ ಕ್ರೀಡಾಕೂಟದ ಬಹುಮಾನ ವಿತರಣೆ ಮಾಡಲಾಯಿತು. ಊರಿನವರ ಉತ್ತಮ ಸಹಕಾರ ದಾನಿಗಳ ಕೊಡುಗೆ ಹಾಗೂ ಗೆಳೆಯರ ಬಳಗದ ಸರ್ವ ಸದಸ್ಯರ ಕಠಿಣ ಪರಿಶ್ರಮದಿಂದ 25 ಸಂವತ್ಸರವನ್ನು ಯಶಸ್ವಿಯಾಗಿ ಪೂರೈಸಿರುವ ಗೆಳೆಯರ ಬಳಗದ ರಜತ ಸಂಭ್ರಮ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಮಕ್ಕಳಿಂದ ಹಾಗೂ ಊರವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಬದ್ ಕ್ ದ ಬಿಲೆ ಎಂಬ ತುಳು ನಾಟಕ ಹಾಗೂ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸಿದ ತುಳು ಹಾಸ್ಯಮಯ ನಾಟಕ ‘ರಂಗಭೂಮಿ’ ಯಶಸ್ವಿಯಾಗಿ ಪ್ರದರ್ಶನಗೊಂಡಿತು.

ನೆಲ್ಸನ್ ಮೋನಿಸ್ ಅಕ್ಷಯನಗರ ಹಾಗೂ ಶ್ರೀಮತಿ ಯಶೋಧ ಪಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!