25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30ವ) ಈ ದುರ್ಘಟನೆಯಲ್ಲಿ ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮುಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya
error: Content is protected !!