ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30ವ) ಈ ದುರ್ಘಟನೆಯಲ್ಲಿ ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮುಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya
error: Content is protected !!