July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀ ಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭಿಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು , ರಾಜವರ್ಮ ಬಲ್ಲಾಳ್, ಬಲ್ಲಾಳ್ ಕುಟುಂಬಸ್ಥರು, ಅರ್ಚಕರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya
error: Content is protected !!