23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀ ಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭಿಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು , ರಾಜವರ್ಮ ಬಲ್ಲಾಳ್, ಬಲ್ಲಾಳ್ ಕುಟುಂಬಸ್ಥರು, ಅರ್ಚಕರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya
error: Content is protected !!