April 16, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ಆರೋಪಿ ಬಂಟ್ವಾಳ ಸಜಿಪನಡು ನಿವಾಸಿ ಜುಮಾರ್ ಎಂಬಾತನಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ವರ್ಷ ಕಾರಾಗೃಹ ಹಾಗೂ 10 ಸಾವೀರ ರೂ.ದಂಡ ವಿಧಿಸಿ . ಫೆ.11 ರಂದು ಆದೇಶ ನೀಡಿದೆ.

ಪ್ರಕರಣ ವಿವರ: ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ನೆರೆಯ ಸಂಬಂಧಿಯೊಂದಿಗೆ ಗೋಳಿಯಂಗಡಿಯ ಐ.ಟಿ.ಐಗೆ ಹೋಗುತ್ತಿರುವ ಸಮಯ ಆರೋಪಿತ ದಿನಾಲೂ ಹಿಂಬಾಲಿಸಿಕೊಂಡು ಬರುತ್ತಿದ್ದುದಲ್ಲದೆ , ಬೈಕ್‌ ನಿಲ್ಲಿಸಿ ಬೈಕ್‌ ನಲ್ಲಿ ಬರುತ್ತೀರಾ, ನಿಮ್ಮ ಪೋನು ನಂಬ್ರ ಕೊಡಿ ಎಂದು ಕೇಳುತ್ತಿದ್ದು 2024 ಅ. 15 ರಂದು ಬೆಳಿಗ್ಗೆ ಸುಮಾರು 7.45 ಗಂಟೆಗೆ ಎಂದಿನಂತೆ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಸಂಬಂಧಿ ಯೊಂದಿಗೆ ಐಟಿಐಗೆ ನಡೆದುಕೊಂಡು ಹೋಗುವ ಸಮಯ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎಂಬಲ್ಲಿ ಆರೋಪಿತ ಜುಮಾರ್, ಅತನ ಬೈಕ್‌ ನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಾಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದು,ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ: 77/2024 ಕಲಂ: 78 BNS-2023 ಮತ್ತು:ಕಲಂ;12 ಪೋಕ್ಸೋ ಕಾಯಿದೆ- 2012 ರಂತೆ ಪ್ರಕರಣ ದಾಖಲಾಗಿತ್ತು.


ಸದ್ರಿ ಪ್ರಕರಣದ ತನಿಖೆಯನ್ನು ನಡೆಸಿದ ವೇಣೂರು ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಶ್ರೀಶೈಲ ಡಿ. ಮುರಗೋಡ್‌ರವರು ಜುಮಾರ್‌ ನನ್ನು ದಸ್ತಗಿರಿ ಪಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪ್ರಕರಣಕ್ಕೆ ಸಂಬಂದಿಸಿದ ಪೂರಕ ಸಾಕ್ಷಿಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಆರೋಪಿತನ ವಿರುದ್ದ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಸದ್ರಿ ಪ್ರಕರಣದಲ್ಲಿ ಒಟ್ಟು18 ಸಾಕ್ಷಿಧಾರರನ್ನು ಹೊಂದಿದ್ದು,
ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ವೆಂಕಟೇಶ್‌ ಎ ಎಸ್‌ ಐ ವೇಣೂರು ಠಾಣೆ, ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್‌ಗಳನ್ನು ಪಿಸಿ ಈರಾ ನಾಯ್ಕ್‌ರವರು, ಸೆಷನ್ಸ್ ನ್ಯಾಯಾಲಯದ ಕರ್ತವ್ಯವನ್ನು ಕಾಲವ್ ರವರು ನಿವ೯ಹಿಸಿದರು. ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಸಹನಾ ದೇವಿ ರವರು ವಾದಿಸಿರುತ್ತಾರೆ.

Related posts

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya
error: Content is protected !!