36.7 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಮೂಡುಬಿದಿರೆ: ಎನ್ ಟಿ ಎ ನಡೆಸುವ ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-1 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.


ಮೊದಲ ಆವೃತ್ತಿಯ ಪರೀಕ್ಷೆಯನ್ನು ಜನವರಿ-ಫೆಬ್ರವರಿಯಲ್ಲಿ ನಡೆಸಲಾಗಿದ್ದರೆ, ಎರಡನೇ ಆವೃತ್ತಿ ಏಪ್ರಿಲ್ನಲ್ಲಿ ನಡೆಯಲಿದೆ. ಜೆಇಇ-ಮೇನ್ಸ್ ಪತ್ರಿಕೆ 1 ಮತ್ತು ಪತ್ರಿಕೆ 2 ರ ಫಲಿತಾಂಶಗಳ ಆಧಾರದ ಮೇಲೆ, ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ಜೆಇಇ-ಅಡ್ವಾಸ್ಡ್ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ, ಇದು 23 ಪ್ರಮುಖ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (ಐಐಟಿ) ಪ್ರವೇಶ ಪಡೆಯಲು ದಾರಿ ಮಾಡಿಕೊಡುತ್ತದೆ. ಎಕ್ಸಲೆಂಟ್ ಮೂಡುಬಿದಿರೆ ದೇಶದ ಅತ್ಯುತ್ತಮ ಶಿಕ್ಷಕವರ್ಗವನ್ನು ಹೊಂದಿದ್ದು, ಶ್ರೇಷ್ಠ ಮಟ್ಟದ ತರಬೇತಿ ನೀಡುತ್ತಿದ್ದೆ, ಇಲ್ಲಿಯವರೆಗೆ ಹಲವಾರು ವಿದ್ಯಾರ್ಥಿಗಳು ದೇಶದ ವಿವಿಧ ಐಐಟಿಗಳಿಗೆ ಪ್ರವೇಶವನ್ನು ಪಡೆದಿರುವುದು ಇಲ್ಲಿಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಶಿಶಿರ್ ಎಚ್ ಶೆಟ್ಟಿ (99.97143 ಪರ್ಸೆಂಟೈಲ್), ಶ್ರೇಯಾಂಕ್ ಮನೋಹರ ಪೈ (99.8251 ಪರ್ಸೆಂಟೈಲ್), ಕಾರ್ತಿಕ್ ಎಸ್ (99.027 ಪರ್ಸೆಂಟೈಲ್) ಉತ್ತಮ ಅಂಕ ಗಳಿಸುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಹೆಚ್ಚು, 6 ವಿದ್ಯಾರ್ಥಿಗಳು98 ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು 36 ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ. ವಿಷಯವಾರು 7 ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ, 6 ವಿದ್ಯಾರ್ಥಿಗಳು ರಸಾಯನ ಶಾಸ್ತ್ರದಲ್ಲಿ, 4 ವಿದ್ಯಾರ್ಥಿಗಳು ಗಣಿತಶಾಸ್ತ್ರದಲ್ಲಿ 99 ಪರ್ಸೈಂಟೈಲ್‌ಗಿಂತ ಅಧಿಕ ಅಂಕವನ್ನು ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!