24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಮೂಡುಬಿದಿರೆ: ಎನ್ ಟಿ ಎ ನಡೆಸುವ ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-1 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.


ಮೊದಲ ಆವೃತ್ತಿಯ ಪರೀಕ್ಷೆಯನ್ನು ಜನವರಿ-ಫೆಬ್ರವರಿಯಲ್ಲಿ ನಡೆಸಲಾಗಿದ್ದರೆ, ಎರಡನೇ ಆವೃತ್ತಿ ಏಪ್ರಿಲ್ನಲ್ಲಿ ನಡೆಯಲಿದೆ. ಜೆಇಇ-ಮೇನ್ಸ್ ಪತ್ರಿಕೆ 1 ಮತ್ತು ಪತ್ರಿಕೆ 2 ರ ಫಲಿತಾಂಶಗಳ ಆಧಾರದ ಮೇಲೆ, ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ಜೆಇಇ-ಅಡ್ವಾಸ್ಡ್ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ, ಇದು 23 ಪ್ರಮುಖ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (ಐಐಟಿ) ಪ್ರವೇಶ ಪಡೆಯಲು ದಾರಿ ಮಾಡಿಕೊಡುತ್ತದೆ. ಎಕ್ಸಲೆಂಟ್ ಮೂಡುಬಿದಿರೆ ದೇಶದ ಅತ್ಯುತ್ತಮ ಶಿಕ್ಷಕವರ್ಗವನ್ನು ಹೊಂದಿದ್ದು, ಶ್ರೇಷ್ಠ ಮಟ್ಟದ ತರಬೇತಿ ನೀಡುತ್ತಿದ್ದೆ, ಇಲ್ಲಿಯವರೆಗೆ ಹಲವಾರು ವಿದ್ಯಾರ್ಥಿಗಳು ದೇಶದ ವಿವಿಧ ಐಐಟಿಗಳಿಗೆ ಪ್ರವೇಶವನ್ನು ಪಡೆದಿರುವುದು ಇಲ್ಲಿಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಶಿಶಿರ್ ಎಚ್ ಶೆಟ್ಟಿ (99.97143 ಪರ್ಸೆಂಟೈಲ್), ಶ್ರೇಯಾಂಕ್ ಮನೋಹರ ಪೈ (99.8251 ಪರ್ಸೆಂಟೈಲ್), ಕಾರ್ತಿಕ್ ಎಸ್ (99.027 ಪರ್ಸೆಂಟೈಲ್) ಉತ್ತಮ ಅಂಕ ಗಳಿಸುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಹೆಚ್ಚು, 6 ವಿದ್ಯಾರ್ಥಿಗಳು98 ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು 36 ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ. ವಿಷಯವಾರು 7 ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ, 6 ವಿದ್ಯಾರ್ಥಿಗಳು ರಸಾಯನ ಶಾಸ್ತ್ರದಲ್ಲಿ, 4 ವಿದ್ಯಾರ್ಥಿಗಳು ಗಣಿತಶಾಸ್ತ್ರದಲ್ಲಿ 99 ಪರ್ಸೈಂಟೈಲ್‌ಗಿಂತ ಅಧಿಕ ಅಂಕವನ್ನು ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!