22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಮೂಡುಬಿದಿರೆ: ಎನ್ ಟಿ ಎ ನಡೆಸುವ ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-1 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.


ಮೊದಲ ಆವೃತ್ತಿಯ ಪರೀಕ್ಷೆಯನ್ನು ಜನವರಿ-ಫೆಬ್ರವರಿಯಲ್ಲಿ ನಡೆಸಲಾಗಿದ್ದರೆ, ಎರಡನೇ ಆವೃತ್ತಿ ಏಪ್ರಿಲ್ನಲ್ಲಿ ನಡೆಯಲಿದೆ. ಜೆಇಇ-ಮೇನ್ಸ್ ಪತ್ರಿಕೆ 1 ಮತ್ತು ಪತ್ರಿಕೆ 2 ರ ಫಲಿತಾಂಶಗಳ ಆಧಾರದ ಮೇಲೆ, ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ಜೆಇಇ-ಅಡ್ವಾಸ್ಡ್ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ, ಇದು 23 ಪ್ರಮುಖ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (ಐಐಟಿ) ಪ್ರವೇಶ ಪಡೆಯಲು ದಾರಿ ಮಾಡಿಕೊಡುತ್ತದೆ. ಎಕ್ಸಲೆಂಟ್ ಮೂಡುಬಿದಿರೆ ದೇಶದ ಅತ್ಯುತ್ತಮ ಶಿಕ್ಷಕವರ್ಗವನ್ನು ಹೊಂದಿದ್ದು, ಶ್ರೇಷ್ಠ ಮಟ್ಟದ ತರಬೇತಿ ನೀಡುತ್ತಿದ್ದೆ, ಇಲ್ಲಿಯವರೆಗೆ ಹಲವಾರು ವಿದ್ಯಾರ್ಥಿಗಳು ದೇಶದ ವಿವಿಧ ಐಐಟಿಗಳಿಗೆ ಪ್ರವೇಶವನ್ನು ಪಡೆದಿರುವುದು ಇಲ್ಲಿಯ ಶೈಕ್ಷಣಿಕ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಶಿಶಿರ್ ಎಚ್ ಶೆಟ್ಟಿ (99.97143 ಪರ್ಸೆಂಟೈಲ್), ಶ್ರೇಯಾಂಕ್ ಮನೋಹರ ಪೈ (99.8251 ಪರ್ಸೆಂಟೈಲ್), ಕಾರ್ತಿಕ್ ಎಸ್ (99.027 ಪರ್ಸೆಂಟೈಲ್) ಉತ್ತಮ ಅಂಕ ಗಳಿಸುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಪರೀಕ್ಷೆಗೆ ಹಾಜರಾದ 89 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಹೆಚ್ಚು, 6 ವಿದ್ಯಾರ್ಥಿಗಳು98 ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು 36 ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ. ವಿಷಯವಾರು 7 ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ, 6 ವಿದ್ಯಾರ್ಥಿಗಳು ರಸಾಯನ ಶಾಸ್ತ್ರದಲ್ಲಿ, 4 ವಿದ್ಯಾರ್ಥಿಗಳು ಗಣಿತಶಾಸ್ತ್ರದಲ್ಲಿ 99 ಪರ್ಸೈಂಟೈಲ್‌ಗಿಂತ ಅಧಿಕ ಅಂಕವನ್ನು ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya
error: Content is protected !!