36.7 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಅಳದಂಗಡಿ : ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ( ರಿ )ಅಳದಂಗಡಿ ಇದರ 2023 -2024ನೇ ಸಾಲಿನ ವಾರ್ಷಿಕ ಮಹಾಸಭೆಯು ಫೆ.11 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಭಾರತಿಯವರ ಅಧ್ಯಕ್ಷತೆಯಲ್ಲಿ ಸರ್ವ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಯನ್ನು ನಡೆಸಲಾಯಿತು.

ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಮ್.ಬಿ.ಕೆ ಹರ್ಷಲಾ ಒಕ್ಕೂಟದ ವಾರ್ಷಿಕ ವರದಿ ಮಂಡನೆ ಹಾಗೂ ಒಕ್ಕೂಟದ ಜಮಾ ಖರ್ಚು ನ್ನು ಮಂಡಿಸಿ ಅನುಮೋದನೆಯನ್ನು ಪಡೆಯಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸಭೆಯನ್ನು ಉದ್ದೇಶಿಸಿ ಮಾತಾನಾಡಿದರು. ತಾಲೂಕು ಬ್ಲಾಕ್ ಮ್ಯಾನೇಜರ್ ನಿತೇಶ್ ಒಕ್ಕೂಟದ ವಾರ್ಷಿಕ ಮಹಾಸಭೆ ಬಗ್ಗೆ, ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿಗಳನ್ನು ನೀಡಿದರು. ತಾಲೂಕು ವಲಯ ಮೇಲ್ವಿಚಾರಕ ಸ್ವಸ್ತಿಕ್ ವಾರ್ಷಿಕ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿಯ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಈ ವೇಳೆ ಒಕ್ಕೂಟ ದಡಿಯಲಿ ರಚನೆಯಾದ ಸಹನಾ ಸಂಜೀವಿನಿ ಗುಂಪಿನ ಸದಸ್ಯರಾದ ಮೈಮುನ ಇವರು ಮನೆಯಲ್ಲಿಯೇ ತಯಾರಿಸಿದಂತಹ ಸಹನಾ ಸಂಜೀವಿನಿ ಸೋಪ್ ಆಯಿಲ್, ದೀಪಶ್ರೀ ಶಕ್ತಿ ಗುಂಪಿನ ಸದಸ್ಯರಾದ ಪ್ರೇಮ ಜೈನ್ ಅವರು ಮನೆಯಲ್ಲಿಯೇ ತಯಾರಿಸಿದ ಕಷಾಯ ಹುಡಿ, ಹಾಗೂ ಲಕ್ಷ್ಮಿ ಸಂಜೀವಿನಿ ಗುಂಪಿನ ಸದಸ್ಯರಾದ ಶಾಲಿನಿ ಜೈನ್ ಇವರು ಮನೆಯಲ್ಲಿ ತಯಾರಿಸಿದಂತಹ ಮಾವಿನ ಉಪ್ಪಿನಕಾಯಿಯನ್ನು ಬಿಡುಗಡೆ ಮಾಡಲಾಯಿತು.

ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ, ಗೌರವಿಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಒಕ್ಕೂಟದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಶುಭಲಕ್ಸ್ಮಿ ಸಂಜೀವಿನಿ ಗುಂಪಿನ ಅಧ್ಯಕ್ಷೆ ಸ್ವಾತಿ ನಿರೂಪಿಸಿ, ಎಲ್.ಸಿ.ಆರ್.ಪಿ ಆಶಾ ಸ್ವಾಗತಿಸಿದರು. ಕೃಷಿ ಸಖಿ ಜಾನೆಟ್ ಡಿ ಸೋಜಾ ಧನ್ಯವಾದವಿತ್ತರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya
error: Content is protected !!