25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya
error: Content is protected !!