22.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya
error: Content is protected !!