23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆಯನ್ನು ಫೆ.12 ರಂದು ಆಚರಿಸಲಾಯಿತು.
ಶ್ರೀ .ಧ .ಮ. ಪದವಿ ಕಾಲೇಜಿನ ಸಂಸ್ಕೃತ ಮುಖ್ಯಸ್ಥರಾದ ಶ್ರೀಧರ್ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತ ಭೂಮಿಯು ನಮ್ಮ ಬದುಕಿಗೆ ಆಧಾರವಾಗಿದೆ. ಗಿಡಮರಗಳು ಬೆಳೆಯಲು ಮತ್ತು ಒಳ್ಳೆಯ ಫಲವನ್ನು ನೀಡಲು ಮಣ್ಣು ಬೇಕು ಈ ಭೂಮಿ ಹುಣ್ಣಿಮೆಯಂದು ಭೂಮಿ ತಾಯಿ ಪೂಜೆಯನ್ನು ಹಿಂದಿನಿಂದಲೂ ಮಾಡುತ್ತಾ ಬಂದಿರುತ್ತಾರೆ . ಇಂದಿನಿಂದ ಭೂಮಿ ತಾಯಿ ಫಲವತ್ತತೆಗೆ ತಯಾರಾಗಿದ್ದಾಳೆ ಎಂಬ ಮಾತಿದೆ . ಈ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಮಾತನಾಡುತ್ತಾ ಈ ದಿನ ಭೂಮಿ ತಾಯಿ ರುತುಮತಿ ಆಗುವ ದಿನ. ಈ ದಿನ ಭೂಮಿಗೆ ಯಾವುದೇ ತೊಂದರೆ ಆಗುವ ಕೆಲಸ ಮಾಡಬಾರದು ಎಂದು ಹೇಳುತ್ತಾರೆ . ಈ ದಿನ ಭೂಮಿ ತಾಯಿಗೆ ನಮಸ್ಕರಿಸಿ ಕ್ಷಮೆಯನ್ನು ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರತ್ನಮಾನಸದ ಎದುರುಗಡೆ ಸೆಗಣಿ ಸಾರಿಸಿ ಭೂಮಿಗೆ ಎಣ್ಣೆ ಹೊಯ್ದು ಕುಂಕುಮ, ಧೂಪ, ದೀಪ ಇಟ್ಟು ಹಾಗೂ ಅಕ್ಕಿ ಮತ್ತು ಹುರುಳಿಯಿಂದ ಮಾಡಲಾದ ಪುಡಿ ( ನನ್ನರಿ) ಮತ್ತು ಗೋಳಿ ಎಲೆಯಿಂದ ಮಾಡಲಾದ ಕಡಬುವನ್ನಿಟ್ಟು ಭೂಮಿತಾಯಿನ್ನು ಪೂಜಿಸಲಾಯಿತು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!