19.1 C
ಪುತ್ತೂರು, ಬೆಳ್ತಂಗಡಿ
February 13, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30ವ) ಈ ದುರ್ಘಟನೆಯಲ್ಲಿ ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮುಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya
error: Content is protected !!