24.4 C
ಪುತ್ತೂರು, ಬೆಳ್ತಂಗಡಿ
June 6, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30ವ) ಈ ದುರ್ಘಟನೆಯಲ್ಲಿ ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮುಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!