30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀ ಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭಿಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು , ರಾಜವರ್ಮ ಬಲ್ಲಾಳ್, ಬಲ್ಲಾಳ್ ಕುಟುಂಬಸ್ಥರು, ಅರ್ಚಕರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!