25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.12 ರಿಂದ ಪ್ರಾರಂಭಗೊಂಡು ಫೆ.21 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಇಂದು (ಫೆ.12) ಬೆಳಿಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀ ಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭಿಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕ ಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು , ರಾಜವರ್ಮ ಬಲ್ಲಾಳ್, ಬಲ್ಲಾಳ್ ಕುಟುಂಬಸ್ಥರು, ಅರ್ಚಕರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!