36.7 C
ಪುತ್ತೂರು, ಬೆಳ್ತಂಗಡಿ
February 12, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ಆರೋಪಿ ಬಂಟ್ವಾಳ ಸಜಿಪನಡು ನಿವಾಸಿ ಜುಮಾರ್ ಎಂಬಾತನಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ವರ್ಷ ಕಾರಾಗೃಹ ಹಾಗೂ 10 ಸಾವೀರ ರೂ.ದಂಡ ವಿಧಿಸಿ . ಫೆ.11 ರಂದು ಆದೇಶ ನೀಡಿದೆ.

ಪ್ರಕರಣ ವಿವರ: ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ನೆರೆಯ ಸಂಬಂಧಿಯೊಂದಿಗೆ ಗೋಳಿಯಂಗಡಿಯ ಐ.ಟಿ.ಐಗೆ ಹೋಗುತ್ತಿರುವ ಸಮಯ ಆರೋಪಿತ ದಿನಾಲೂ ಹಿಂಬಾಲಿಸಿಕೊಂಡು ಬರುತ್ತಿದ್ದುದಲ್ಲದೆ , ಬೈಕ್‌ ನಿಲ್ಲಿಸಿ ಬೈಕ್‌ ನಲ್ಲಿ ಬರುತ್ತೀರಾ, ನಿಮ್ಮ ಪೋನು ನಂಬ್ರ ಕೊಡಿ ಎಂದು ಕೇಳುತ್ತಿದ್ದು 2024 ಅ. 15 ರಂದು ಬೆಳಿಗ್ಗೆ ಸುಮಾರು 7.45 ಗಂಟೆಗೆ ಎಂದಿನಂತೆ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಸಂಬಂಧಿ ಯೊಂದಿಗೆ ಐಟಿಐಗೆ ನಡೆದುಕೊಂಡು ಹೋಗುವ ಸಮಯ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎಂಬಲ್ಲಿ ಆರೋಪಿತ ಜುಮಾರ್, ಅತನ ಬೈಕ್‌ ನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಾಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದು,ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ: 77/2024 ಕಲಂ: 78 BNS-2023 ಮತ್ತು:ಕಲಂ;12 ಪೋಕ್ಸೋ ಕಾಯಿದೆ- 2012 ರಂತೆ ಪ್ರಕರಣ ದಾಖಲಾಗಿತ್ತು.


ಸದ್ರಿ ಪ್ರಕರಣದ ತನಿಖೆಯನ್ನು ನಡೆಸಿದ ವೇಣೂರು ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಶ್ರೀಶೈಲ ಡಿ. ಮುರಗೋಡ್‌ರವರು ಜುಮಾರ್‌ ನನ್ನು ದಸ್ತಗಿರಿ ಪಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪ್ರಕರಣಕ್ಕೆ ಸಂಬಂದಿಸಿದ ಪೂರಕ ಸಾಕ್ಷಿಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಆರೋಪಿತನ ವಿರುದ್ದ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಸದ್ರಿ ಪ್ರಕರಣದಲ್ಲಿ ಒಟ್ಟು18 ಸಾಕ್ಷಿಧಾರರನ್ನು ಹೊಂದಿದ್ದು,
ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ವೆಂಕಟೇಶ್‌ ಎ ಎಸ್‌ ಐ ವೇಣೂರು ಠಾಣೆ, ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್‌ಗಳನ್ನು ಪಿಸಿ ಈರಾ ನಾಯ್ಕ್‌ರವರು, ಸೆಷನ್ಸ್ ನ್ಯಾಯಾಲಯದ ಕರ್ತವ್ಯವನ್ನು ಕಾಲವ್ ರವರು ನಿವ೯ಹಿಸಿದರು. ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಸಹನಾ ದೇವಿ ರವರು ವಾದಿಸಿರುತ್ತಾರೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya
error: Content is protected !!