20.2 C
ಪುತ್ತೂರು, ಬೆಳ್ತಂಗಡಿ
February 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!