25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!