March 7, 2026
ಆರೋಗ್ಯ

ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾ ಶ್ರಮದಲ್ಲಿ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ವೈದ್ಯರ ಕೊಠಡಿಯ ಉದ್ಘಾಟನೆ

ಗುಂಡೂರಿ‌ : ಹಿರಿಯ ವೈದ್ಯ ಬಡಕೋಡಿ ಗುತ್ತು ಮನೆತನದ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾಶ್ರಮದ ವೈದ್ಯರ ಕೊಠಡಿಯ ಉದ್ಘಾಟನೆ ಫೆ.9ರಂದು ನಡೆಯಿತು.
ಕರಿಮಣೇಲಿನ ಮೂಂಕಾಡಿಯ ರಾಮಚಂದ್ರ ನಾಯಕ್ ಮತ್ತು ಗೀತಾರವರ 40 ನೇ ವರುಷದ ವೈವಾಹಿಕ ಜೀವನದ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ಸೇವಾಶ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮ ಕೇಳದ ಪೇಟೆ ವೈದಿಕರಾದ ಶ್ರೀಪತಿ ಭಟ್ ರವರಿಂದ ಗಣಹೋಮ ನಡೆದು ದಂಪತಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವೇಣೂರಿನ ಹಿರಿಯ ವೈದ್ಯ ಸರಳ ಸಜ್ಜನ ಈ ವೈದ್ಯರ ಮೂಲಕ ವೈದ್ಯರ ಕೊಠಡಿಯನ್ನು ಉದ್ಘಾಟಿಸಲಾಯಿತು ಮತ್ತು ಇವರನ್ನು ಸಂಮ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಗಳೂರಿನ ಉದ್ಯಮಿ ರಮೇಶ್ ನಾಯಕ್ ಹಾಗೂ ಇವರ ಧರ್ಮಪತ್ನಿ ಸುಚಿತ್ರಾ, ಗೋಳಿಯಂಗಡಿಯ ಸತ್ಯರಾಜ್ ಪರಿವಾರ್ ನ ಉದ್ಯಮಿ ಸತ್ಯೇಂದ್ರ ರಾವ್,ಉದ್ಯಮಿ ಭಾಸ್ಕರ ಪೈ, ಸುದತ್ ಜೈನ್,ಆರಂಬೋಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಪ್ರಭಾಕರ ಹುಲಿಮೇರು, ಬಂಧುಮಿತ್ರರು ಉಪಸ್ಥಿತರಿದ್ದರು. ಮನೋರಂಜನೆಗಾಗಿ ಆಗ್ನಿದುರ್ಗೆ ರಸಮಂಜರಿ ತಂಡದಿಂದ ಸಂಗೀತ ಕಾರ್ಯಕ್ರಮ ವಿತ್ತು. ನಿವೃತ್ತ ಸೇನಾನಿ ರಾಮಚಂದ್ರ ನಾಯಕ್ ರವರು ಸ್ವಾಗತಿಸಿದರು ಶ್ರೀಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯರವರು ಕಾರ್ಯಕ್ರಮ ನಿರೂಪಿಸಿದರು.

Related posts

ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya
error: Content is protected !!