23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya
error: Content is protected !!